ಭಾಸ್ಕರಾಚಾರ್ಯ

testwikiದಿಂದ
ಬದಲಾವಣೆ ೧೫:೪೫, ೩ ಮೇ ೨೦೨೪ ರಂತೆ imported>Kartikdn ಇವರಿಂದ
(ವ್ಯತ್ಯಾಸ) ←ಹಿಂದಿನ ಪರಿಷ್ಕರಣೆ | ಈಗಿನ ಪರಿಷ್ಕರಣೆ (ವ್ಯತ್ಯಾಸ) | ಮುಂದಿನ ಪರಿಷ್ಕರಣೆ → (ವ್ಯತ್ಯಾಸ)
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು

ಟೆಂಪ್ಲೇಟು:Infobox Writer ಭಾಸ್ಕರಾಚಾರ್ಯ ಅಥವಾ ಎರಡನೆಯ ಭಾಸ್ಕರ (೧೧೧೪ - ೧೧೮೫), ಭಾರತದ ಗಣಿತಜ್ಞ ಹಾಗೂ ಖಗೋಳಶಾಸ್ತ್ರಜ್ಞ.

ಜೀವನ, ಸಾಧನೆ

ಕರ್ನಾಟಕ ರಾಜ್ಯದ ವಿಜಯಪುರ ಬಳಿ ಬಿಜ್ಜಡಬೀಡ ಎಂಬಲ್ಲಿ ಜನಿಸಿದ.[] ಇವನ ಕಾಲಘಟ್ಟ ಕ್ರಿ. ಶ. 1114. ತಂದೆ ಮಹೇಶ್ವರೋಪಾಧ್ಯಾಯ.ಟೆಂಪ್ಲೇಟು:Sfn ತಂದೆಯೂ ಗಣಿತಜ್ಞ. ಅವರಿಂದಲೇ ಮೊದಲ ಪಾಠ. ಭಾಸ್ಕರಾಚಾರ್ಯ ಉಜ್ಜಯಿನಿಖಗೋಳಶಾಸ್ತ್ರ ಕೇಂದ್ರದಲ್ಲಿ ಮುಖ್ಯಸ್ಥನಾದನು.ಟೆಂಪ್ಲೇಟು:Sfn ಅಲ್ಲಿ ವರಾಹಮಿಹಿರ ಮತ್ತು ಬ್ರಹ್ಮಗುಪ್ತರ ಗಣಿತ ಸಂಪ್ರದಾಯವನ್ನು ಮುಂದುವರೆಸಿದನು. ದಶಮಾನ ಪದ್ಧತಿ ಹಾಗೂ ಆಧುನಿಕ ಬೀಜಗಣಿತದಲ್ಲಿ ಉಪಯೋಗಿಸಲ್ಪಡುವ ಅಕ್ಷರಪದ್ಧತಿಯನ್ನು ಮೊದಲಿಗೆ ಬಳಕೆಗೆ ತಂದವರು ಇವರು. ಇವರು ಒಟ್ಟು ಆರು ಗ್ರಂಥಗಳನ್ನು ರಚಿಸಿದರು. ಸಿದ್ಧಾಂತ ಶಿರೋಮಣಿ ಎಂಬುದು ಖಗೋ-ಗಣಿತದ ಗ್ರಂಥ.ಟೆಂಪ್ಲೇಟು:Sfn ಇದನ್ನು 1150ರಲ್ಲಿ ಬರೆದ.[] ಇದರಲ್ಲಿ ಲೀಲಾವತಿ, ಬೀಜಗಣಿತ, ಗೋಳಾಧ್ಯಾಯ, ಗ್ರಹಗಣಿತ ಎಂಬ ನಾಲ್ಕು ಭಾಗಗಳಿವೆ.ಟೆಂಪ್ಲೇಟು:Sfn ಇದರಲ್ಲಿ ಆಕಾಶ, ಸೂರ್ಯ, ಚಂದ್ರ ಹಾಗು ಗ್ರಹಗಳ ಸಂಪೂರ್ಣ ವಿವರಣೆ ಇದೆ. 'ಲೀಲಾವತಿ' ಎಂಬುದು ತನ್ನ ಮಗಳ ವಿನೋದಕ್ಕಾಗಿ ಬರೆದುದೆಂದು ಹೇಳಲಾಗುತ್ತದೆಯಾದರೂ ಅಂಕಗಣಿತವೇ ಇದರ ಜೀವಾಳ. ಆಗಿನ ಕಾಲದ ಪದ್ಧತಿಯಂತೆ ಕ್ಷೇತ್ರಗಣಿತವನ್ನೂ (ಮೆನ್ಸುರೇಶನ್) ಪೈಥಾಗೊರಸನ ಪ್ರಮೇಯದ ಮೇಲೆ ನಿಲ್ಲುವ ಸ್ವಲ್ಪ ರೇಖಾಗಣಿತವನ್ನೂ ಕುಟ್ಟಕವೆಂಬ ಬೀಜಗಣಿತ ಭಾಗವನ್ನೂ ಈ ಗ್ರಂಥದಲ್ಲಿ ಸೇರಿಸಿರುತ್ತಾನೆ. ಸಿದ್ಧಾಂತ ಶಿರೋಮಣಿಯ ಇತರ ಭಾಗಗಳಲ್ಲಿ ಭಾಸ್ಕರನ ಮುಖ್ಯ ಸಂಶೋಧನೆಗಳು ಹಲವು ಅಡಕವಾಗಿವೆ. ಮೂಲ ಗ್ರಂಥದ ವ್ಯಾಖ್ಯಾನವಾದ ವಾಸನಾಭಾಷ್ಯವೆಂಬ ಗ್ರಂಥವನ್ನೂ ಭಾಸ್ಕರ ಬರೆದ. ಹಿಂದಿನವರಾದ ಬ್ರಹ್ಮಗುಪ್ತ, ಶ್ರೀಧರ, ಪದ್ಮನಾಭ ಮುಂತಾದವರ ಗ್ರಂಥಗಳಲ್ಲಿ ಸಾರವತ್ತಾದುದನ್ನು ತೆಗೆದುಕೊಂಡು ಉಪಯುಕ್ತ ಪಠ್ಯಗ್ರಂಥ ಬರೆಯುವುದೇ ಭಾಸ್ಕರನ ಧ್ಯೇಯ. ಗ್ರಂಥದಲ್ಲಿ ಸುಂದರ ಕವಿತಾ ಕೌಶಲವನ್ನೂ ತೋರಿಸಿರುತ್ತಾನೆ.

ಲೀಲಾವತಿ

ಮೊದಲನೆಯ ಭಾಗಕ್ಕೆ ತನ್ನ ನಿರ್ಭಾಗ್ಯ ಪುತ್ರಿ ಲೀಲಾವತಿಯ ಹೆಸರು ಕೊಟ್ಟಿರುವುದಾಗಿ ಕಥೆಯಿದೆ. ಇದು ಚರ್ಚಾಸ್ಪದ. ಗ್ರಂಥ ಅಂಕಗಣಿತ ಕುರಿತ ಪಠ್ಯಗ್ರಂಥವಾದರೂ ಇದರಲ್ಲಿ ಅನೇಕ ಸ್ವಾರಸ್ಯಕರ ವಿಷಯಗಳು ಇವೆ. ಶೂನ್ಯ (ಸೊನ್ನೆ 0) ಮತ್ತು ಅನಂತದ ಪರಿಕಲ್ಪನೆಗಳೂ, ಪರಿಮಿತಿ (ಲಿಮಿಟ್) ಪರಿಕಲ್ಪನೆಯೂ ಸ್ವಲ್ಪಮಟ್ಟಿಗೆ ಇವೆ. ನಿಖರತೆ ಸಾಲದು. ಗೋಳದ ಘನ ಮತ್ತು ಮೇಲ್ಮೈಯ ಸಲೆಯ ಬೆಲೆಗಳನ್ನು ಕೊಟ್ಟಿರುತ್ತಾನೆ. ಕ್ರಮಯೋಜನೆ ಮತ್ತು ವಿಕಲ್ಪ (ಪರ್ಮ್ಯುಟೇಶನ್ ಮತ್ತು ಕಾಂಬಿನೇಶನ್) ಕುರಿತ ಅನೇಕ ಸ್ವಾರಸ್ಯಕರ ಲೆಕ್ಕಗಳಿವೆ. n ಪದಾರ್ಥಗಳಲ್ಲಿ a ಒಂದು ತರಹದವು, b ಇನ್ನೊಂದು ತರಹದವು, ಇತ್ಯಾದಿಯಾದರೆ, ಎಲ್ಲ ಪದಾರ್ಥಗಳನ್ನೂ ಜೋಡಿಸಬಹುದಾದ ವಿಧಗಳ ಸಂಖ್ಯೆ n!a!b!. ಈ ಪ್ರಮೇಯವನ್ನು ಮೊತ್ತಮೊದಲು ಭಾಸ್ಕರ ಕೊಟ್ಟ. a+b+c+d ಎಂಬುದರ ವರ್ಗಮೂಲ ಸಾಧ್ಯವಾದಲ್ಲಿ ಪಡೆಯುವ ವಿಧಾನ ಕೊಟ್ಟಿರುತ್ತಾನೆ.

ಜನಸಾಮಾನ್ಯರಿಗೆ ಗಣಿತದಲ್ಲಿ ಅಭಿರುಚಿ ಹುಟ್ಟುವುದಕ್ಕಾಗಿಯೂ ಮನರಂಜನೆಗಾಗಿಯೂ ಸ್ವಾರಸ್ಯಕರ ಉದಾಹರಣೆಗಳನ್ನು ಕಟ್ಟುವುದು ಒಂದು ಪದ್ಧತಿ. ಇಂಥ ಉದಾಹರಣೆಗಳನ್ನು ವಿನೋದ ಗಣಿತವೆಂದು ಹೇಳುವುದೂ ಉಂಟು. ಭಾಸ್ಕರ ಕೊಟ್ಟಿರುವ ವಿನೋದಗಣಿತದ ಪ್ರಶ್ನೆಗಳು ಅರ್ಥದ ದೃಷ್ಟಿಯಿಂದಲೂ ಶೈಲಿಯ ದೃಷ್ಟಿಯಿಂದಲೂ ಬಹಳ ಚೆನ್ನಾಗಿದ್ದು ಅತ್ಯಂತ ಪ್ರಸಿದ್ಧವಾಗಿವೆ. ಅನೇಕ ಗ್ರಂಥಕರ್ತರು ಈ ಉದಾಹರಣೆಗಳನ್ನು ತಮ್ಮ ಗ್ರಂಥಗಳಿಗೆ ಆಯ್ದು ಕೊಂಡಿದ್ದಾರೆ. ಭಾಸ್ಕರನಾದರೂ ಇವನ್ನು ಹಿಂದಿನವರ ಗ್ರಂಥಗಳಲ್ಲಿದ್ದ ಉದಾಹರಣೆಗಳಿಗೆ ರೂಪುಗೊಟ್ಟು ಶೇಖರಿಸಿದ್ದಾನೆ ಎಂಬುದಕ್ಕೆ ಆಧಾರಗಳು ಸಿಗುತ್ತವೆ. ಲೆಕ್ಕಗಳಲ್ಲಿ ಸಾಮಾನ್ಯ ಅಂಕಗಣಿತಕ್ಕೆ ಸೇರತಕ್ಕವೂ ವರ್ಗ ಸಮೀಕರಣಕ್ಕೆ ಅನ್ವಯಿಸುವವೂ, ಪೈಥಾಗೊರಸನ ಪ್ರಮೇಯವನ್ನು ಅವಲಂಬಿಸುವವೂ ಇವೆ. ಒಂದೊಂದಕ್ಕೆ ಒಂದೊಂದು ಉದಾಹರಣೆಯನ್ನು ಇಲ್ಲಿ ಕೊಟ್ಟಿದೆ.

ಅಂಕಗಣಿತ

ಟೆಂಪ್ಲೇಟು:Poemquote

ಅರ್ಥ: ಎರಡು ನಿಷ್ಕಗಳಿಗೆ 1 ಪಲ ಒಳ್ಳೆಯ ಕರ್ಪೂರವೂ18 ದ್ರಮ್ಮಕ್ಕೆ 1 ಪಲ ಚಂದನ ಅಥವಾ 12 ಪಲ ಅಗರುವೂ ದೊರೆಯುತ್ತವೆ. ಎಲೈ ವರ್ತಕನೇ! ನಾನು ಧೂಪವನ್ನು ತಯಾರಿಸಬೇಕಾಗಿರುವುದರಿಂದ ಈ ಮೂರು ಪದಾರ್ಥಗಳು 1:16:8 ನಿಷ್ಟತ್ತಿಯಲ್ಲಿರುವಂತೆ 1 ನಿಷ್ಕಕ್ಕೆ ಕೊಡು (ನಿಷ್ಕ, ದ್ರಮ್ಮ ಇವು ಹಳೆಯ ನಾಣ್ಯಗಳು; 1 ನಿಷ್ಕ = 16 ದ್ರಮ್ಮ).

ಉತ್ತರ: 1429ದ್ರಮ್ಮಕ್ಕೆ 49 ಪಲ ಕರ್ಪೂರ, 89 ದ್ರಮ್ಮಕ್ಕೆ 649 ಪಲ ಚಂದನ ಮತ್ತು 89 ದ್ರಮ್ಮಕ್ಕೆ 329 ಪಲ ಅಗರು.

ವರ್ಗ ಸಮೀಕರಣ

ಟೆಂಪ್ಲೇಟು:Poemquote

ಅರ್ಥ: ದುಂಬಿಗಳ ಗುಂಪಿನಲ್ಲಿರುವ ಸಂಖ್ಯೆಯ ಅರ್ಧದ ವರ್ಗಮೂಲದಷ್ಟು ಮಾಲತೀ ಪುಷ್ಪಗಳಿಗೆ ಹೋದುವು: ಒಟ್ಟು ಸಂಖ್ಯೆಯ 8/9 ಭಾಗ ಕೂಡ ಅಲ್ಲಿಗೇ ಹೋದುವು. ಒಂದು ಗಂಡು ದುಂಬಿ ಕಮಲ ಪುಷ್ಪದ ಪರಿಮಳಕ್ಕೆ ಆಸೆಪಟ್ಟು ಅದರ ಮಧ್ಯದಲ್ಲಿ ಸೇರಿದ್ದ ವೇಳೆಯಲ್ಲಿ ರಾತ್ರಿಯಾಗಿ ಪುಷ್ಪ ಮುಚ್ಚಿಕೊಂಡಿತು. ಈ ದುಂಬಿ ಒಳಗೆ ಸಿಕ್ಕಿಹೋಯಿತು. ಇದರ ಹೆಣ್ಣು ದುಂಬಿ ಒಳಗಿನಿಂದ ಬರುವ ಕೂಗಿಗೆ ಪ್ರತ್ಯುತ್ತರ ಕೊಡುತ್ತ ಹೊರಗೆ ಇತ್ತು. ದುಂಬಿಗಳ ಸಂಖ್ಯೆ ಎಷ್ಟು?

ಉತ್ತರ: ದುಂಬಿಗಳ ಸಂಖ್ಯೆ x ಅದರೆ, ಇದರಿಂದ ಬರುವ ಸಮೀಕರಣ: x2+89x+2=x. x=72  (ವರ್ಗಸಮೀಕರಣದ ಮತ್ತೊಂದು ಮೂಲ ಋಣಸಂಖ್ಯೆಯಾದ್ದರಿಂದ ಉಪಯೋಗವಾಗುವುದಿಲ್ಲ.)

ಪೈಥಾಗೊರಸನ ಪ್ರಮೇಯ

ಟೆಂಪ್ಲೇಟು:Poemquote

ಅರ್ಥ: 9 ಮೊಳ ಎತ್ತರದ ಕಂಬದ ಮೇಲೆ ಒಂದು ನವಿಲು ಕುಳಿತಿದೆ. ಕಂಬದ ಬುಡದಲ್ಲಿ ಒಂದು ಹುತ್ತ. ಹುತ್ತದ ಕಡೆಗೆ 27 ಮೊಳ ದೂರದಿಂದ ಒಂದು ಹಾವು ಬರುತ್ತಿದೆ. ಇದನ್ನು ಕಂಡು, ನವಿಲು ನೇರವಾಗಿ ಬಂದು ಹಾವನ್ನು ಹಿಡಿದುಬಿಡುತ್ತದೆ. ನವಿಲಿನ ವೇಗವೂ ಹಾವಿನ ವೇಗವೂ ಒಂದೇ ಆದರೆ, ಹುತ್ತದಿಂದ ಎಷ್ಟು ದೂರದಲ್ಲಿ ಹಾವು ಸಿಕ್ಕಿಬೀಳುತ್ತದೆ?

ಉತ್ತರ:

AB = ಕಂಬ = 9
AC = 27
AD = x ಆದರೆ BD = DC = 27 - x
92+x2=(27x)2
x = 12

ಲೀಲಾವತಿ ಗ್ರಂಥಕ್ಕೆ ಅನೇಕರು ವ್ಯಾಖ್ಯಾನಗಳನ್ನು ಬರೆದಿರುತ್ತಾರೆ. ಅಕ್ಬರನ ಕಾಲದಲ್ಲಿ ಲೀಲಾವತಿಯೂ ಬೀಜಗಣಿತವೂ ಪಾರ್ಸಿ ಭಾಷೆಗೆ ಭಾಷಾಂತರ ಮಾಡಲ್ಪಟ್ಟವು.

ಕಲನಶಾಸ್ತ್ರ

ಅವಕಲನಶಾಸ್ತ್ರವನ್ನು (ಕ್ಯಾಲ್ಕ್ಯುಲಸ್) ಭಾಸ್ಕರ ಸ್ವಲ್ಪಮಟ್ಟಿಗೆ ಆರಂಭಿಸಿದ. ಗ್ರಹಗಳ ಚಲನೆಯನ್ನು ದಿನಂಪ್ರತಿ ಕಂಡುಹಿಡಿಯುವ ಸಂದರ್ಭದಲ್ಲಿ ತಾತ್ಕಾಲಿಕ ಗತಿ ಎಂಬ ಕಲನಶಾಸ್ತ್ರದ ಪರಿಕಲ್ಪನೆಯನ್ನು ಮೂಡಿಸಿ δ(sinx)=cosxδx ಎಂಬ ಪ್ರಮೇಯವನ್ನು ಕೊಟ್ಟ,[] ಎಂದರೆ ಅವಕಲನಾಂಕದ (ಡಿಫರೆನ್ಷಿಯಲ್ ಕೋಎಫಿಶಂಟ್) ಮೊತ್ತಮೊದಲನೆಯ ಉದಾಹರಣೆಯನ್ನು ಭಾಸ್ಕರ ನ್ಯೂಟನ್ ಲೈಬ್‍ನಿಟ್ಸರಿಗಿಂತ 500 ವರ್ಷಗಳ ಹಿಂದೆಯೇ ಕೊಟ್ಟಿದ್ದ. ಅಲ್ಲದೆ, f(x) ಫಲನ (ಫಂಕ್ಷನ್) ಗರಿಷ್ಠ ಅಥವಾ ಕನಿಷ್ಠ ಪಡೆದಾಗ ಅದರ ಅವಕಲನಾಂಕ ಶೂನ್ಯ, ಎಂದರೆ ಚಿಹ್ನೆಗಳಲ್ಲಿ, f(x) ಗರಿಷ್ಠ ಅಥವಾ ಕನಿಷ್ಠವಾದಾಗ, f'(x) = 0 ಎಂಬ ಪ್ರಮೇಯವನ್ನು ಕೊಟ್ಟಿದ್ದ.ಟೆಂಪ್ಲೇಟು:Sfn

ಬೀಜಗಣಿತ

ಭಾಸ್ಕರನ ಅತಿಮುಖ್ಯ ಸಂಶೋಧನೆ ಎಂದರೆ Nx2 + 1 = y2 ಎಂಬ ಸಮೀಕರಣಕ್ಕೆಟೆಂಪ್ಲೇಟು:Sfn ಬ್ರಹ್ಮಗುಪ್ತ ಕೊಟ್ಟಿರುವ ಸಾಧನೆಯನ್ನು ಮುಂದುವರಿಸುತ್ತ ಚಕ್ರವಾಳವೆಂಬ ವಿಧಾನವನ್ನು ಕೊಟ್ಟದ್ದು.[][][] ಬ್ರಹ್ಮಗುಪ್ತ ಈ ಸಮೀಕರಣದ ಸಾಧನೆಯನ್ನು nx2+k=y2,±1,±2±4 ಎಂಬ ಸಮೀಕರಣದ ಸಾಧನೆ ಅವಲಂಬಿಸುವಂತೆ ಮಾಡಿದ.[] ಆದರೆ ಈ ಎರಡನೆಯ ಸಮೀಕರಣವನ್ನು ಹೇಗೆ ಸಾಧಿಸಬಹುದು ಎಂದು ತಿಳಿಸಲಿಲ್ಲ. ಇದಕ್ಕಾಗಿ ಭಾಸ್ಕರ ಚಕ್ರವಾಳ ವಿಧಾನವನ್ನು ಶೋಧಿಸಿದ. ಯಾವುದಾದರೂ k ತೆಗೆದುಕೊಂಡು ಮೊದಲು na2 + k = b2 ಎಂಬ ಸಮೀಕರಣವನ್ನು ಪಡೆಯುವುದು. ಇದರೊಂದಿಗೆ N.12 + (m2 - N) = m2 ಎಂಬುದನ್ನು ಸಮೀಕರಿಸಿ

N(am+bk)2+m2Nk=(bm+Nak)2 ಎಂಬುದನ್ನು ಪಡೆಯುವುದು. ಕುಟ್ಟಕ ವಿಧಾನದಿಂದ am+bk ಪೂರ್ಣಾಂಕವಾಗುವಂತೆಯೂ m2 - N ಕನಿಷ್ಠವಾಗುವಂತೆಯೂ m ಪಡೆಯುವುದು. m - n ಎನ್ನೋಣ. ಈಗ an+bk=a1n2Nk=k1bn+Nak=b1 ಆದರೆ a1, b1, k1 ಮೂರೂ ಪೂರ್ಣಾಂಕಗಳೆಂದು ಸಾಧಿಸಬಹುದು. ಈಗ a, b, k ಗಳಿಂದ a1, b1, k1 ಪಡೆದಂತೆಯೇ a1, b1, k1 ಗಳಿಂದ a2, b2, k2 ಗಳನ್ನು ಪಡೆಯಬೇಕು. ಈ ವಿಧಾನವನ್ನು ಪುನಃ ಪುನಃ ಆಚರಿಸುತ್ತ ಬಂದಲ್ಲಿ k=±1,±2 ಅಥವಾ ±4 ಎಂಬ ಘಟ್ಟ ಬಂದೇಬರುತ್ತದೆ. ಅದರಿಂದಾಚೆಗೆ ಬ್ರಹ್ಮಗುಪ್ತನ ವಿಧಾನದಿಂದ Nx2 + 1 = y2 ಸಮೀಕರಣಕ್ಕೆ ಉತ್ತರ ದೊರಕುತ್ತದೆ. ಒಂದು ಉತ್ತರ ದೊರಕಿದ ಮೇಲೆ, ಅದರಿಂದ ಸಮಾಸ ಕ್ರಿಯೆ ಆಚರಿಸಿ ಅನಂತ ಸಂಖ್ಯೆಯಲ್ಲಿ ಉತ್ತರಗಳನ್ನು ಪಡೆಯಬಹುದು.

ಉದಾಹರಣೆ: 61x2 + 1 = y2. ಇದು ಒಂದು ಚಾರಿತ್ರಿಕ ಉದಾಹರಣೆ. ಫರ್ಮಾ ಎಂಬ ಪ್ರಸಿದ್ಧ ಫ್ರೆಂಚ್ ವಿದ್ವಾಂಸ 1657ರಲ್ಲಿ ಇದರ ಸಾಧನೆಯನ್ನು ಪಂದ್ಯವಾಗಿ ತನ್ನ ಮಿತ್ರರಿಗೆ ಕೊಟ್ಟ. ಭಾಸ್ಕರಾಚಾರ್ಯ 1150ರಲ್ಲಿ ಇದೇ ಲೆಕ್ಕವನ್ನು ತನ್ನ ಚಕ್ರವಾಳ ವಿಧಾನದಿಂದ ಮೂರೇ ಹೆಜ್ಜೆಗಳಲ್ಲಿ ಉತ್ತರ ಪಡೆಯುತ್ತಾನೆ.[] ಇದನ್ನು ಸರಿದೂಗಿಸುವ ಕನಿಷ್ಠ ಸಂಖ್ಯೆಗಳಿವು: x = 226,153,980; y = 1,766,319,049.

Nx2 + 1 = y2 ಎಂಬ ಸಮೀಕರಣಕ್ಕೆ ಬ್ರಹ್ಮಗುಪ್ತ-ಭಾಸ್ಕರ ಸಮೀಕರಣ ಎಂಬ ಹೆಸರು ಒಪ್ಪುತ್ತದೆ. ಇದರ ಸಮಗ್ರ ಸಿದ್ಧಾಂತವನ್ನು ಲಗ್ರಾಂಜ್ 1766ರಲ್ಲಿ ಸಂತತ ಭಿನ್ನರಾಶಿಗಳ (ಕಂಟಿನ್ಯೂಡ್ ಫ್ರ್ಯಾಕ್ಷನ್ಸ್) ಸಿದ್ಧಾಂತದ ಸಹಾಯದಿಂದ ವಿವರಿಸಿದ. ಭಾರತೀಯ ವಿಧಾನವೂ ಪಾಶ್ಚಾತ್ಯ ವಿಧಾನವೂ ಸಂಪೂರ್ಣ ಬೇರೆ ಬೇರೆ. ಮೇಲಿನ ಉದಾಹರಣೆಯನ್ನು ಎರಡು ವಿಧಾನಗಳಿಂದಲೂ ಸಾಧಿಸಿದರೆ ಈ ವ್ಯತ್ಯಾಸದ ಅಂತರ ವ್ಯಕ್ತವಾಗುವುದು.

ಬ್ರಹ್ಮಗುಪ್ತ-ಭಾಸ್ಕರ ಸಮೀಕರಣಕ್ಕೆ ಪರಿವರ್ತಿಸಿ ಉತ್ತರ ಪಡೆಯಬೇಕಾದ ಕೆಲವು ಲೆಕ್ಕಗಳನ್ನು ಭಾಸ್ಕರ ಕೊಡುತ್ತಾನೆ. ಉದಾಹರಣೆಗೆ ಎರಡು ಸಂಖ್ಯೆಗಳ ಮೊತ್ತದ ವರ್ಗಕ್ಕೆ ಅವುಗಳ ಮೊತ್ತದ ಘನವನ್ನು ಸೇರಿಸಿದರೆ, ಸಂಖ್ಯೆಗಳ ಘನಗಳ ಮೊತ್ತದ ಎರಡರಷ್ಟಾಗುತ್ತದೆ. ಸಂಖ್ಯೆಗಳಾವುವು?

ಈ ಪ್ರಶ್ನೆಯನ್ನು ಪ್ರಾಚೀನ ಗ್ರಂಥಕರ್ತರಿಂದ ತೆಗೆದುಕೊಂಡುದೆಂದು ಭಾಸ್ಕರ ತಿಳಿಸುತ್ತಾನೆ. ಸಂಖ್ಯೆಗಳನ್ನು x+y, x-y ಎಂದು ತೆಗೆದುಕೊಂಡು ಭಾಸ್ಕರ ಮೇಲಿನ ಉಕ್ತಿಯನ್ನು 4x2+4x3=2(x+y)3+2(xy)3+2(xy)3 ಎಂಬ ಬೀಜವಾಕ್ಯವಾಗಿ ಬರೆಯುತ್ತಾನೆ. ಇದನ್ನು ಸುಲಭ ರೂಪಕ್ಕೆ ತಂದರೆ x2+x=3y2 ದೊರೆಯುತ್ತದೆ.

4x2+4x+1=12y2+1

12y2+1=(2x+1)2=z2

ಇದರ ಪರಿಹಾರಗಳು y = 2, z = 7; y = 28, z =97 ಇತ್ಯಾದಿ. ಆದ್ದರಿಂದ ನಮಗೆ ಬೇಕಾದ ಸಂಖ್ಯೆ (5, 76), (1, 20), ಇತ್ಯಾದಿ.

ದಶಮಾಂಶ ಪದ್ಧತಿಯನ್ನು ಈತನೇ ಅಭಿವೃದ್ಧಿಪಡಿಸಿದನೆಂದು ನಂಬಲಾಗಿದೆ.

ನಿಧನ

ಭಾಸ್ಕರಾಚಾರ್ಯನು ಕ್ರಿ. ಶ. 1185ರಲ್ಲಿ ಮರಣಹೊಂದಿದ.

ಮುಖ್ಯ ಕೃತಿಗಳು

  • ಲೀಲಾವತಿ ಗಣಿತ (ಮುಖ್ಯವಾಗಿ ಅಂಕಗಣಿತದ ಬಗ್ಗೆ, ತನ್ನ ಮಗಳ ಮನೋರಂಜನೆಗಾಗಿ ಬರೆದದ್ದೆಂದು ಹೇಳಲಾಗುತ್ತದೆ).
  • ಬೀಜಗಣಿತ
  • ಸಿದ್ಧಾಂತಶಿರೋಮಣಿ: ಇದರಲ್ಲಿ ಎರಡು ಭಾಗಗಳಿವೆ:
    • ಗೋಳಾಧ್ಯಾಯ
    • ಗ್ರಹಗಣಿತ

ಹೆಚ್ಚಿನ ಮಾಹಿತಿಗಾಗಿ

  1. ಭಾಸ್ಕರಾಚಾರ್ಯ ವಿರಚಿತ ಲೀಲಾವತಿ 108 ಆಯ್ದ ಲೆಕ್ಕಗಳು

ಇವನ್ನೂ ನೋಡಿ

ಉಲ್ಲೇಖಗಳು

ಟೆಂಪ್ಲೇಟು:ಉಲ್ಲೇಖಗಳು

ಹೆಚ್ಚಿನ ಓದಿಗೆ

ಹೊರಗಿನ ಸಂಪರ್ಕಗಳು

ಟೆಂಪ್ಲೇಟು:ಭಾರತೀಯ ಗಣಿತಜ್ಞರು

  1. "1. Ignited minds page 39 by APJ Abdul Kalam, 2. Prof Sudakara Divedi (1855-1910), 3. Dr B A Salethor (Indian Culture), 4. Govt of Karnataka Publications, 5. Dr Nararajan (Lilavati 1989), 6. Prof Sinivas details(Ganitashatra Chrithra by1955, 7. Aalur Venkarayaru (Karnataka Gathvibaya 1917, 8. Prime Minister Press Statement at sarawad in 2018, 9. Vasudev Herkal (Syukatha Karnataka articles), 10. Manjunath sulali (Deccan Herald 19/04/2010, 11. Indian Archaeology 1994-96 A Review page 32, Dr R K Kulkarni (Articles)"
  2. ಟೆಂಪ್ಲೇಟು:Citationಟೆಂಪ್ಲೇಟು:Unreliable source?
  3. 50 Timeless Scientists von K.Krishna Murty
  4. Hoiberg & Ramchandani – Students' Britannica India: Bhaskaracharya II, page 200
  5. Kumar, page 23
  6. 50 Timeless Scientists von K.Krishna Murty
  7. ಟೆಂಪ್ಲೇಟು:Cite web
  8. Mathematical Achievements of Pre-modern Indian Mathematicians von T.K Puttaswamy